ಶುಭ್ಮನ್ ಗಿಲ್  online desk
ಕ್ರಿಕೆಟ್

ಜಿಂಬಾಂಬ್ವೆ ವಿರುದ್ಧದ T20 ಟೂರ್ನಿಗೆ ಭಾರತ ತಂಡ ಪ್ರಕಟ: ಶುಭ್ಮನ್ ಗಿಲ್ ನಾಯಕ; ತಂಡದಲ್ಲಿದೆ ಹಲವು ವಿಶೇಷತೆ!

ಜಿಂಬಾಂಬ್ವೆ ವಿರುದ್ಧದ T20 ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದ್ದು, ಶುಭ್ಮನ್ ಗಿಲ್ ಅವರನ್ನು ನಾಯಕನನ್ನಾಗಿ ಮಾಡಲಾಗಿದೆ.

ಜಿಂಬಾಂಬ್ವೆ ವಿರುದ್ಧದ T20 ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದ್ದು, ಶುಭ್ಮನ್ ಗಿಲ್ ಅವರನ್ನು ನಾಯಕನನ್ನಾಗಿ ಮಾಡಲಾಗಿದೆ.

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ಭಾರತದ ಟಿ20 ವಿಶ್ವಕಪ್ ತಂಡದಲ್ಲಿದ್ದ ಕ್ರಿಕೆಟಿಗರ ಪೈಕಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಇಬ್ಬರೇ ಜಿಂಬಾಂಬ್ವೆ ವಿರುದ್ಧದ ಟಿ20 ಪಂದ್ಯಕ್ಕೆ ಆಯ್ಕೆಯಾಗಿರುವ ಆಟಗಾರರಾಗಿದ್ದಾರೆ. ರಿಂಕು ಸಿಂಗ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜು.6 ರಿಂದ 14 ವರೆಗೆ ಸರಣಿ ನಡೆಯಲಿದೆ.

ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಋತುರಾಜ್ ಗಾಯಕ್ವಾಡ್ ಜಿಂಬಾಂಬ್ವೆ ವಿರುದ್ಧ ಸೆಣೆಸಲಿರುವ ಭಾರತ ತಂಡದಲ್ಲಿರಲಿದ್ದು, ಧ್ರುವ್ ಜುರೆಲ್ ಅವರನ್ನು ಸೆಕೆಂಡ್ ವಿಕೆಟ್ ಕೀಪರ್ ನನ್ನಾಗಿ ಆಯ್ಕೆ ಮಾಡಲಾಗಿದೆ.

ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಸ್ವದೇಶಿ ಸರಣಿಯಲ್ಲಿ ಕೊನೆಯ ಬಾರಿಗೆ ಆಡಿದ ವಾಷಿಂಗ್ಟನ್ ಸುಂದರ್ ಅವರು ಈ ಸರಣಿಯ ಮೂಲಕ ಭಾರತೀಯ ತಂಡಕ್ಕೆ ಮರಳಿದ್ದಾರೆ.

ಟಿ20 ವಿಶ್ವಕಪ್‌ನೊಂದಿಗೆ ರಾಹುಲ್ ದ್ರಾವಿಡ್ ಅವಧಿ ಮುಗಿಯುತ್ತಿದ್ದಂತೆ ಜಿಂಬಾಂಬ್ವೆ ವಿರುದ್ಧದ ಸರಣಿಗೆ ಭಾರತ ತಂಡದ ಕೋಚ್ ಯಾರು ಎಂಬುದನ್ನು ಕಾದು ನೋಡಬೇಕಿದೆ.

ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (w/k), ಧ್ರುವ್ ಜುರೆಲ್ (w/k), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.

ವೇಳಾಪಟ್ಟಿ: ಭಾರತದ ಜಿಂಬಾಬ್ವೆ ಪ್ರವಾಸ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30 IST

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30 IST

3ನೇ T20: ಜುಲೈ 10, ಹರಾರೆ, ಸಂಜೆ 4.30 IST

4ನೇ T20: ಜುಲೈ 13, ಹರಾರೆ, ಸಂಜೆ 4.30 IST

5 ನೇ T20: ಜುಲೈ 14, ಹರಾರೆ, ಸಂಜೆ 4.30 IST

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್

Suburban rail: ಕಂಟೋನ್ಮೆಂಟ್‌ನಲ್ಲಿ ಮರಗಳನ್ನು ಕಡಿಯದಂತೆ ಹೈಕೋರ್ಟ್ ಆದೇಶ

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'

ಮಧ್ಯಾಹ್ನ ಬಿಸಿಯೂಟ: ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!

SCROLL FOR NEXT